Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಜೆರುಸಲೇಮಿನವರನ್ನು, ಬೇರೆ ಎಲ್ಲ ಯೆಹೂದ್ಯರನ್ನು, ಯಾಜಕರನ್ನು ಹಾಗು ಲೇವಿಯರನ್ನು ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ದೊಡ್ಡವರೂ ಚಿಕ್ಕವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಲೇವಿಯರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅರಸನೂ ಯೆಹೂದದಲ್ಲಿ ವಾಸಿಸುವ ಜನರೂ ಜೆರುಸಲೇಮಿನಲ್ಲಿ ವಾಸಿಸುವ ಜನರೂ ಯಾಜಕರೂ ಲೇವಿಯರೂ ದೊಡ್ಡವರು ಸಣ್ಣವರು ಎಂಬ ವ್ಯತ್ಯಾಸವಿಲ್ಲದೆ ತಮ್ಮ ಅರಸನೊಂದಿಗೆ ಇದ್ದರು. ಯೋಷೀಯನು ಧರ್ಮಶಾಸ್ತ್ರವನ್ನು ಜನರಿಗೆ ಓದಿ ತಿಳಿಸಿದನು. ಆ ಪುಸ್ತಕವು ದೇವಾಲಯದಲ್ಲಿ ಸಿಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅರಸನೂ ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಯಾಜಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರ ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:30
19 ತಿಳಿವುಗಳ ಹೋಲಿಕೆ  

ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.


ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು.


ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ. ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.


ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;


ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.


ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.


ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು.


ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.


ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.


ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.


ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು