Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಅವನು ಬಾಳ್‍ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಹಾಳು ಮಾಡಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಅಶೇರಸ್ತಂಭ ಕೆತ್ತಿದ ಮತ್ತು ಎರಕದ ವಿಗ್ರಹ ಇವುಗಳನ್ನು ಒಡಿಸಿ ಪುಡಿಪುಡಿಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ದೂಳನ್ನು ಚೆಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:4
21 ತಿಳಿವುಗಳ ಹೋಲಿಕೆ  

ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.


ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.


ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.


ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.


ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.


ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!


ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.


ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.


ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.


ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು