Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡೆಸಿದನು, ಇಸ್ರಯೇಲ್ ನಾಡಿನಲ್ಲಿದ್ದ ಸೂರ್ಯಸ್ತಂಭಗಳನ್ನು ಪುಡಿಪುಡಿಮಾಡಿಸಿ ಜೆರುಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡಿಸಿ ಪುಡಿಪುಡಿಮಾಡಿಸಿ ಇಸ್ರಾಯೇಲ್‍ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಯೆರೂಸಲೇವಿುಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಲ್ಲಿಂದ ಮುಂದೆ ಇಸ್ರೇಲ್ ದೇಶದಲ್ಲೂ ಪೂಜಾಸ್ಥಳಗಳನ್ನು ಕೆಡವಿ, ಅಶೇರಸ್ತಂಭಗಳನ್ನು ತುಂಡರಿಸಿ ಎರಕದ ಕೆತ್ತನೆಯ ವಿಗ್ರಹಗಳನ್ನು ಪುಡಿಮಾಡಿ, ಧೂಪವೇದಿಕೆಗಳನ್ನೆಲ್ಲಾ ನಾಶಮಾಡಿ ಜೆರುಸಲೇಮಿಗೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:7
12 ತಿಳಿವುಗಳ ಹೋಲಿಕೆ  

ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.


ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ.


ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.


ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.


ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.


ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ.


ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು.


ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.


ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.


ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು