Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವರು ನಿನಗೆ ವಿರುದ್ಧವಾಗಿ ಪಾಪಮಾಡಾರು; ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲವಲ್ಲಾ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಜನರು ನಿನಗೆ ವಿರುದ್ಧವಾಗಿ ಪಾಪಮಾಡಬಹುದು; ಪಾಪಮಾಡದೆ ಇರುವವನು ಯಾವನೂ ಇಲ್ಲ. ಆಗ ನೀನು ಅವರ ಮೇಲೆ ಉರಿಗೊಂಡು ಅವರನ್ನು ಶಿಕ್ಷಿಸಲು ನೀನು ವೈರಿಗಳನ್ನು ಅವರ ಮೇಲೆ ಕಳುಹಿಸಿ ಅವರನ್ನು ಸೆರೆಹಿಡಿದು ದೂರದೇಶಕ್ಕೆ ಒಯ್ಯಲ್ಪಡುವಂತೆ ಮಾಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:36
22 ತಿಳಿವುಗಳ ಹೋಲಿಕೆ  

ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


“ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?


ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.


ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಮೆನಹೇಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.


“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,


ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ನೀನು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ, ಕೇಳಿ ಅವರಿಗೆ ಸಹಾಯವನ್ನು ಮಾಡು.


ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ವಿಜ್ಞಾಪನೆ ಮಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು