Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.” ಎಂದು ವಿಜ್ಞಾಪನೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ದೇವರಾದ ಸರ್ವೇಶ್ವರಾ, ನಿಮ್ಮಿಂದ ಅಭಿಷೇಕ ಆದವನನ್ನು ತಳ್ಳಿಬಿಡಬೇಡಿ. ನಿಮ್ಮ ದಾಸ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೊಳ್ಳಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ದೇವರಾದ ಯೆಹೋವನೇ, ನಿನ್ನಿಂದ ಅಭಿಷೇಕಿಸಲ್ಪಟ್ಟಿರುವ ಅರಸನನ್ನು ತಳ್ಳಿಬಿಡಬೇಡ. ನಿನಗೆ ನಂಬಿಗಸ್ತನಾದ ಸೇವಕನಾಗಿದ್ದ ದಾವೀದನನ್ನು ನೆನಪುಮಾಡಿಕೊ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೆಹೋವ ದೇವರೇ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ. ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನಮಾಡಿದ ಮಹಾ ಪ್ರೀತಿಯನ್ನು ನೆನಪುಮಾಡಿಕೊಳ್ಳಿರಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:42
11 ತಿಳಿವುಗಳ ಹೋಲಿಕೆ  

ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.


“ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.


ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.


ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.


ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,


ಅದನ್ನು ತಿರಸ್ಕರಿಸಬೇಡ” ಎನ್ನಲು ಆಕೆಯು, “ಅದೇನು ಹೇಳು” ಎಂದಳು.


ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.


ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು