Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:3
26 ತಿಳಿವುಗಳ ಹೋಲಿಕೆ  

ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.


ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.


ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.


ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.


ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.


ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.


ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.


ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.


ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.


ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.


ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು