Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೋಶೆಯ ಆಜ್ಞೆಯಂತೆ, ಸಬ್ಬತ್‍ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಯಜ್ಞವೇದಿಯ ಮೇಲೆ ಮೋಶೆಯ ಆಜ್ಞೆಯಂತೆ ಸಬ್ಬತ್ ದಿವಸ, ಅಮಾವಾಸ್ಯೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆ, ಪಂಚಾಶತ್ತಮದಿನದ ಜಾತ್ರೆ, ಪರ್ಣಶಾಲೆಗಳ ಜಾತ್ರೆ ಎಂಬೀ ಮೂರು ವಾರ್ಷಿಕಜಾತ್ರೆಗಳಲ್ಲಿಯೂ ಆಯಾ ದಿವಸಗಳಿಗೆ ನೇಮಕವಾದ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಿನಂಪ್ರತಿ ಮೋಶೆಯ ಆಜ್ಞೆಯ ಪ್ರಕಾರ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಯೂ ವರುಷಕ್ಕೆ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಗುಡಾರಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:13
12 ತಿಳಿವುಗಳ ಹೋಲಿಕೆ  

ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.


“ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.


ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.


ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು.


ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು