Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಭೂರಾಜರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಭೂರಾಜರೆಲ್ಲರು ಅವನ ದರ್ಶನಕ್ಕೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಭೂರಾಜರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನ ವಾಕ್ಯಗಳನ್ನು ಕೇಳುವದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರು ಅವನಿಗೆ ದಯಪಾಲಿಸಿದ ಜ್ಞಾನವನ್ನು ನೋಡಿ ಅವನಿಂದ ಜ್ಞಾನವಾಕ್ಯಗಳನ್ನು ಕೇಳಲು ಲೋಕದ ರಾಜರುಗಳು ಅವನ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತ ಅರಸರು ಅವನ ದರ್ಶನವನ್ನು ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:23
19 ತಿಳಿವುಗಳ ಹೋಲಿಕೆ  

ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.


ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


“ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.


ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣಿಗಳು, ಶಸ್ತಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು