Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಪ್ರಜೆಗಳು ಹಾಗೂ ಸದಾ ನಿಮ್ಮ ಸನ್ನಿಧಿಯಲ್ಲಿ ಇದ್ದುಕೊಂಡು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ಸೇವಕರು ಧನ್ಯರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಪ್ರಜೆಗಳೂ ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನ ಹೆಂಡತಿಯರೂ ನಿನ್ನ ಅಧಿಕಾರಿಗಳೂ ಧನ್ಯರು. ನಿನ್ನ ಸೇವೆಮಾಡುವ ಇವರು ನಿನ್ನ ಜ್ಞಾನೋಪದೇಶವನ್ನು ಯಾವಾಗಲೂ ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:7
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.


ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.


ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.


ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ.


ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು