Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮನ್ನು ಮೆಚ್ಚಿ, ತಮ್ಮ ಸಮ್ಮುಖದಲ್ಲಿ ಅರಸನಾಗಿಸಲು, ತಮ್ಮ ಸಿಂಹಾಸನದ ಮೇಲೆ ನಿಮ್ಮನ್ನು ಕುಳ್ಳಿರಿಸಿದ ಆ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನಿಮ್ಮ ದೇವರು ಇಸ್ರಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿದ್ದಾರೆ. ಆದ್ದರಿಂದಲೇ ಈ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನೇ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನನ್ನು ಮೆಚ್ಚಿ ತನ್ನ ಸನ್ನಿಧಿಯಲ್ಲಿ ಅರಸನಾಗುವದಕ್ಕೆ ನಿನ್ನನ್ನು ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲ್ಯರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ದೇವರಿಗೆ ಸ್ತೋತ್ರವಾಗಲಿ. ಆತನು ನಿನ್ನಲ್ಲಿ ಸಂತೋಷಿಸಿ ತನ್ನ ಸಿಂಹಾಸನದಲ್ಲಿ ನಿನ್ನನ್ನು ಕುಳ್ಳಿರಿಸಿದ್ದಾನೆ. ನಿನ್ನ ದೇವರು ಇಸ್ರೇಲನ್ನು ಪ್ರೀತಿಸುತ್ತಾನೆ ಮತ್ತು ಶಾಶ್ವತವಾಗಿ ಪೋಷಿಸುತ್ತಾನೆ. ಅದಕ್ಕಾಗಿಯೇ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡುವುದಕ್ಕಾಗಿ ನಿನ್ನನ್ನು ಇಸ್ರೇಲಿನ ಅರಸನನ್ನಾಗಿ ಮಾಡಿದ್ದಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನ ದೇವರಾದ ಯೆಹೋವ ದೇವರಿಗೋಸ್ಕರ ಅರಸನಾಗಿರುವಂತೆ ತಮ್ಮ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ಅವರನ್ನು ಯುಗಯುಗಕ್ಕೂ ಸ್ಥಿರಗೊಳಿಸಬೇಕೆಂದಿದ್ದಾರೆ. ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:8
31 ತಿಳಿವುಗಳ ಹೋಲಿಕೆ  

ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. “ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.”


ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.


ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.


“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.


ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.


ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.


ಇಸ್ರಾಯೇಲರು ಸದಾಕಾಲವು ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದ್ದೀ. ಯೆಹೋವನೇ, ನೀನು ಅವರಿಗೆ ದೇವರಾಗಿದ್ದಿ.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,


ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧ ದ್ರವ್ಯವನ್ನೂ, ಅಮೂಲ್ಯರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದ ಸುಗಂಧದ್ರವ್ಯ ಮತ್ತೆ ಸಿಗಲೇ ಇಲ್ಲ.


ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.


ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.


ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು