Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಸೆ ರ್‍ಹಾತಾನಾ, ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮ್ಚೆ ಎಚುನ್ ಘೆಟ್ನೆ ಘಟ್ ಕರ್‍ತಲ್ಯಾ ಹುಕುಮಾಕ್ನಿ ಲೈ ಉಮ್ಮೆದ್ ಥವಾ, ಅಸೆ ಕರ್ಲ್ಯಾರ್ ತುಮಿ ಕನ್ನಾಬಿ ಅಟ್ಕಳುನ್ ಪಡಿನ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:10
31 ತಿಳಿವುಗಳ ಹೋಲಿಕೆ  

ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.


ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.


ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು.


ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.


ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.


ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.


ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.


ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.


ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.


ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು