Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ಮೆಚ್ಚಿದ್ದೇನೆ ಎಂಬಂಥ ವಾಣಿಯು ಸರ್ವೋತ್ಕೃಷ್ಟಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಘನಮಾನಗಳನ್ನು ಹೊಂದಿದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿಯು ಮಹೋನ್ನತ ಮಹಿಮೆಯಿಂದ ಅವರಿಗೆ ಉಂಟಾದದ್ದರಲ್ಲಿ ಅವರು ತಂದೆ ದೇವರಿಂದ ಗೌರವವನ್ನೂ ಮಹಿಮೆಯನ್ನೂ ಹೊಂದಿದರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ದೆವಾ ಬಾಬಾನ್ ಮಹಿಮಾ ಅನಿ ಮಾನ್ ತೆಕಾ ದಿತಾನಾ ಅಮಿ ಥೈ ಹೊತ್ತಾಂವ್, ತನ್ನಾ ಮೊಟ್ಯಾ ಮಹಿಮೆಕ್ನಾ ಎಕ್ ಧನ್ ತೆಕಾ ಆಯ್ಕೊಯೆಲೊ ತೊ ಧನ್ “ಹೊ ಮಾಜೊ ಅಪುರ್‍ಬಾಯೆಚೊ ಲೆಕ್, ಹೊ ಮಾಜ್ಯಾ ಮನಾಕ್ ಯೆಲಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:17
36 ತಿಳಿವುಗಳ ಹೋಲಿಕೆ  

ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.


ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.


ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.


“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,


ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು.


ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.


ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.


ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು.


ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.


ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು