Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಸೆ ತೆನಿ ಅಮ್ಕಾ ಗೊಸ್ಟ್ ದಿವ್ನ್ ಸಾಂಗಲ್ಲೆ ಲೈ ಮೊಟೆ ಅನಿ ಕಿಮ್ತಿಚೆ ವರು ದಿಲ್ಯಾನಾಯ್, ಅಸೆ ಹ್ಯಾ ವರುಕ್ ಲಾಗುನ್ ತೆನಿ ಹ್ಯಾ ಜಗಾಚ್ಯಾ ನಾಸ್ ಹೊವ್ನ್ ಜಾತಲ್ಯಾ ಬುರ್ಶ್ಯಾಪಾನಾತ್ನಾ ಚುಕ್ವುನ್ ಘೆವ್ಚೆ ಅನಿ ದೆವಾಚ್ಯಾ ಗುನಾತ್ ವಾಟೊ ಘೆಯ್ ಸಾರ್ಕೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:4
25 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.


ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.


ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.


ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,


ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.


ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.


ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.


ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು