Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮುಖ್ಯವಾಗಿ ಬಂಡುತನವನ್ನು ಆಶಿಸಿ ಶರೀರಭಾವಾನುಸಾರ ನಡೆದು ಪ್ರಭುತ್ವ ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಫಾಪರರಾಗಿದ್ದು ಮಹಾಪದವಿಯವರನ್ನು ನಿರ್ಭಯವಾಗಿ ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ತಿ ಝುಟಿ ಶಿಕಾಪಾ ಶಿಕ್ವುತಲೆ ಕೊನಾಕ್ಬಿ ಭಿಂಯ್ ನಸ್ತಾನಾ ಅಪ್ನಾಚ್ಯಾ ಮನಾಕ್ ಯೆತಾ ತಸೆ ಆಂಗಾಕ್ ಸಮಂದ್ ಪಡಲ್ಲೆ ಹೊವ್ನ್ ಹಾತ್, ಅನಿ ಮಹಿಮೆಚ್ಯಾ ಪದ್ವಿ ವರ್ತಿ ಅನಿ ಎಕ್ಲ್ಯಾಕ್ನಿ ಮಾನ್ ದಿವ್ನಸ್ತಾನಾ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:10
38 ತಿಳಿವುಗಳ ಹೋಲಿಕೆ  

ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.


ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.


ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,


ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.


ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,


ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.


ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.


ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?


ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.


ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.


ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.


ಅವರು ಲಜ್ಜೆಗೆಟ್ಟವರಾಗಿ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ.


ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,


ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು