Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ ಪವಿತ್ರ್ ನಸಲ್ಲಿ ಗೊಸ್ಟಿಯಾ ಬೊಲುನ್ ಬುರ್ಶ್ಯಾಪಾನಾ ವೈನಾ ತ್ಯಾ ಲೊಕಾಕ್ನಿ ಗೊಂದಳಾಚ್ಯಾ ವಾಟೆತ್ ಚಲ್ವುತಲ್ಯಾ ಲೊಕಾಂಚ್ಯಾಕ್ನಾ ಚುಕ್ವುನ್ ಘೆವ್ಕ್ ಯೆಲ್ಲ್ಯಾಕ್ನಿ ವಾಟ್ ಚುಕ್ವುತಾತ್, ಅಪ್ಲ್ಯಾ ಪಾಪಾಚ್ಯಾ ಸ್ವಭಾವಾ ಸಾರ್ಕೆ ಕರುಕ್ ಇಚ್ಛ್ಯಾ ಕರ್ತಲಿ ಬುರ್ಶಿಕಾಮಾ ವಾಪ್ರುನ್ ಘೆವ್ಕ್ ಹಿ ಝುಟಿ ಶಿಕಾಪಾಕಾರಿ ತೆಂಕಾ ವಾಟ್ ಚುಕ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:18
22 ತಿಳಿವುಗಳ ಹೋಲಿಕೆ  

ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.


ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.


ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.


ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.


ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.


ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.


ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು