Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಧನಿಯಾಚೊ ದಿಸ್ ಚೊರಾ ಸಾರ್ಕೊ ಯೆತಾ, ತ್ಯಾ ದಿಸಿ ಮಳ್ಬಾ ಮೊಟ್ಯಾ ಅವಾಜ್ಯಾ ವಾಂಗ್ಡಾ ನಾ ಪತ್ತೊ ಹೊವ್ನ್ ಜಾತಾ, ಅನಿ ಮುಳ್ ಆಗಿನ್ ಕಡುನ್ ಜಾತಾತ್ ಅನಿ ಜಿಮ್ನಿ ವರ್ತಿ ಹೊತ್ತಿ ಸಗ್ಳಿ ಸಾಮಾನಾ ಜಳುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:10
36 ತಿಳಿವುಗಳ ಹೋಲಿಕೆ  

ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.


“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.


ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.


ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”


ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.


ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.


ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.


ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.


ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.


ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.


ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.


ಭೂಮಿಯು ಒಡೆದೇ ಇದೆ, ಬಿರಿದಿದೆ, ಕದಲಿಯೇ ಹೋಗಿದೆ.


ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.


ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.


ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.


ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.


ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.


ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.


ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ.


ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.


ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು