Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಹತ್ತಿರ ಹೋಗಿ ಅವನು ಬಿದ್ದನಂತರ ಬದುಕಲಾರನೆಂದು ನೆನಸಿ, ಅವನನ್ನು ಕೊಂದು ಹಾಕಿ, ಅವನ ತಲೆಯ ಮೇಲಣ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಕೆಳಕ್ಕೆ ಬಿದ್ದುಬಿಟ್ಟರೆ ಬದುಕಲಾರರೆಂದು ನೆನೆಸಿ ನಾನು ಅವರನ್ನು ಸಮೀಪಿಸಿ ಕೊಂದುಹಾಕಿದೆ. ಅವರ ತಲೆಯ ಮೇಲಿನ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ನನ್ನ ಒಡೆಯರಾದ ತಮ್ಮ ಬಳಿಗೆ ತಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಹತ್ತಿರ ಹೋಗಿ ಅವನು ಬಿದ್ದು ಬಿಟ್ಟರೆ ಬದುಕಲಾರನೆಂದು ನೆನಸಿ ಅವನನ್ನು ಕೊಂದುಹಾಕಿ ಅವನ ತಲೆಯ ಮೇಲಣ ಕಿರೀಟವನ್ನೂ ರಟ್ಟೆಯಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ಅವನನ್ನು ಕೊಂದೆನು. ಅವನು ಮತ್ತೆ ಜೀವದಿಂದ ಉಳಿಯಲಾರದಷ್ಟು ಗಾಯಗೊಂಡಿದ್ದಾನೆಂಬುದು ನನಗೆ ತಿಳಿದಿತ್ತು. ನಂತರ ನಾನು ಅವನ ತಲೆಯಿಂದ ಕಿರೀಟವನ್ನೂ ತೋಳಿನ ಕವಚವನ್ನೂ ತೆಗೆದುಕೊಂಡೆನು. ನನ್ನ ಒಡೆಯನೇ, ನಾನು ಆ ಕಿರೀಟವನ್ನು ಮತ್ತು ತೋಳಿನ ಕವಚವನ್ನು ನಿನ್ನ ಬಳಿಗೆ ತಂದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆದ್ದರಿಂದ ಅವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು, ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು, ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:10
10 ತಿಳಿವುಗಳ ಹೋಲಿಕೆ  

ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.


ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!


ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.


ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.


ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.


ಆಗ ಅವನು ನನಗೆ, ‘ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ’ ಎಂದು ಹೇಳಿದನು.


ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು