Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಡನೆ ದಾವೀದನು ದೂತರ ಮುಖಾಂತರ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು,” ಎಂದು ಆಜ್ಞಾಪಿಸಿದನು. ಅವನು ಅಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಡನೆ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ - ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು ಎಂದು ಆಜ್ಞಾಪಿಸಿದನು. ಅವನು ಊರೀಯನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂಬ ಸಂದೇಶವನ್ನು ಕಳುಹಿಸಿದನು. ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:6
12 ತಿಳಿವುಗಳ ಹೋಲಿಕೆ  

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.


ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು.


ಅವನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು.


ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.


ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.


ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು.


ಊರೀಯನು ಬಂದಾಗ ದಾವೀದನು, “ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?” ಎಂದು ವಿಚಾರಿಸಿದ, ನಂತರ


ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು