Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಅವನಿಗೆ, “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮನೆಗೆ ಹೋಗಿ ಕೈಕಾಲು ತೊಳೆದುಕೋ ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ದಾವೀದನು ಊರೀಯನಿಗೆ, “ಮನೆಗೆ ಹೋಗಿ ವಿಶ್ರಾಂತಿಯನ್ನು ಪಡೆ” ಎಂದನು. ಊರೀಯನು ರಾಜನ ಮನೆಯನ್ನು ಬಿಟ್ಟುಹೋದನು. ಊರೀಯನಿಗೆ ರಾಜನು ಕೊಡುಗೆಗಳನ್ನು ಸಹ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:8
11 ತಿಳಿವುಗಳ ಹೋಲಿಕೆ  

ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು.


ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು.


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!


ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.


ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?


ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.


ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.


ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು.


“ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು