Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಸ್ಥಾನದ ಅಧಿಕಾರಿಗಳು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ, ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನ ಮನೆಯ ಹಿರೀಸೇವಕರು ಅವನನ್ನು ಎಬ್ಬಿಸುವದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಾವೀದನ ಕುಟುಂಬದ ನಾಯಕರು ಬಂದು ಅವನನ್ನು ನೆಲದಿಂದ ಮೇಲಕ್ಕೆತ್ತಲು ಪ್ರಯತ್ನಿಸಿದರು. ಆದರೆ ದಾವೀದನು ಮೇಲೇಳಲಿಲ್ಲ. ಅವನು ಈ ನಾಯಕರೊಂದಿಗೆ ಊಟ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನನ್ನು ಎಬ್ಬಿಸುವುದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು. ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:17
7 ತಿಳಿವುಗಳ ಹೋಲಿಕೆ  

ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.


ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.


ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.


ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು.


ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.


ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.


ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು