Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅರಸನು, “ಮಗನೇ, ಬೇಡ; ನಾವೆಲ್ಲರೂ ಬಂದರೆ ನಿನಗೆ ಕಷ್ಟವಾಗುವುದು,” ಎನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಒಪ್ಪಲಿಲ್ಲ; ಅವನನ್ನು ಆಶೀರ್ವದಿಸಿದನು, ಅಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅರಸನು ಅವನಿಗೆ - ಮಗನೇ, ಬೇಡ; ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಒಪ್ಪಲಿಲ್ಲ, ಅವನನ್ನು ಆಶೀರ್ವದಿಸಿದನು, ಅಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಾಜನಾದ ದಾವೀದನು ಅಬ್ಷಾಲೋಮನಿಗೆ, “ಮಗನೇ, ನಾವೆಲ್ಲ ಬರುವುದಿಲ್ಲ. ಅದು ನಿನಗೆ ಬಹಳ ತೊಂದರೆಯಾಗುತ್ತದೆ” ಎಂದು ಹೇಳಿದನು. ಅಬ್ಷಾಲೋಮನು ಬೇಡಿಕೊಂಡರೂ ದಾವೀದನು ಹೋಗಲಿಲ್ಲ; ಆದರೆ ದಾವೀದನು ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದಕ್ಕೆ ಅರಸನು ಅಬ್ಷಾಲೋಮನಿಗೆ, “ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವುದಿಲ್ಲ,” ಎಂದನು. ಅವನು ರಾಜನನ್ನು ಬಲವಂತ ಮಾಡಿದನು. ಆದರೆ ಅರಸನು ಹೋಗಲು ಒಪ್ಪದೆ, ಅಬ್ಷಾಲೋಮನನ್ನು ಆಶೀರ್ವದಿಸಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:25
9 ತಿಳಿವುಗಳ ಹೋಲಿಕೆ  

ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.


ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.


ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.


ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.


ಅವನು ಅರಸನ ಬಳಿಗೆ ಹೋಗಿ ಅವನನ್ನು, “ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ” ಎಂದು ಬೇಡಿಕೊಂಡನು.


ಆಗ ಅಬ್ಷಾಲೋಮನು, “ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು” ಅಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು