Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37-38 ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ದಾವೀದನು ತನ್ನ ಮಗನಿಗಾಗಿ ಪ್ರತಿನಿತ್ಯವೂ ಗೋಳಾಡುತ್ತಿದ್ದನು. ಗೆಷೂರಿನ ರಾಜನೂ ಅಮ್ಮೀಹೂದನ ಮಗನೂ ಆದ ತಲ್ಮೈನ ಹತ್ತಿರಕ್ಕೆ ಅಬ್ಷಾಲೋಮನು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆದರೆ ಅಬ್ಷಾಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅಮ್ಮೀಹೂದನ ಮಗ ತಲ್ಮಾಯನ ಬಳಿಗೆ ಹೋದನು. ದಾವೀದನು ಬಹಳ ದಿನಗಳವರೆಗೆ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:37
8 ತಿಳಿವುಗಳ ಹೋಲಿಕೆ  

ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.


ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.


ಅದಕ್ಕೆ ಅಬ್ಷಾಲೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು.


ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.


ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು.


ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.


ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?


ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು