Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅರಸ ದಾವೀದನು, ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ತನ್ನ ಮಗ ಅಬ್ಷಾಲೋಮನನ್ನು ನೋಡಲು ಹಾತೊರೆಯತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅರಸನಾದ ದಾವೀದನು ಅಮ್ನೋನನ ಮರಣದ ವಿಷಯ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ತಿರಿಗಿ ನೋಡುವದಕ್ಕೆ ಬಹಳ ಆತುರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅಮ್ನೋನನ ಮರಣದ ವಿಷಯದಲ್ಲಿ ರಾಜನಾದ ದಾವೀದನು ಸಂತೈಸಿಕೊಂಡನು. ಆದರೆ ಅವನು ಅಬ್ಷಾಲೋಮನನ್ನು ಕಾಣಲು ಬಹಳವಾಗಿ ಹಾತೊರೆಯತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದರೆ ಅರಸನಾದ ದಾವೀದನು ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ಅಬ್ಷಾಲೋಮನ ಬಳಿಗೆ ಹೋಗಲು ಬಯಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:39
10 ತಿಳಿವುಗಳ ಹೋಲಿಕೆ  

ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.


ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.


ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.


ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು.


ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.


ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.


ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.


ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು