Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು” ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಣ್ಣೆ ಹಚ್ಚಿಕೊಳ್ಳದೆ ಅರಸನ ಬಳಿಗೆ ಹೋಗು; ಅಲ್ಲಿ ಈ ಮಾತುಗಳನ್ನು ಅವನಿಗೆ ಹೇಳು,” ಎಂದು ಆಜ್ಞಾಪಿಸಿ ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಣ್ಣೆ ಹಚ್ಚಿಕೊಳ್ಳದೆ ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು ಎಂದು ಆಜ್ಞಾಪಿಸಿ ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನ ಬಳಿಗೆ ಹೋಗಿ, ನಾನು ಹೇಳಿಕೊಟ್ಟ ಮಾತುಗಳನ್ನು ಅವನಿಗೆ ಹೇಳು” ಎಂದು ಹೇಳಿದನು. ಯೋವಾಬನು ಬುದ್ಧಿವಂತಳಾದ ಆ ಸ್ತ್ರೀಗೆ ಮಾತಾಡಬೇಕಾದದ್ದನ್ನು ಹೇಳಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು,” ಎಂದು ಹೇಳಿ ಯೋವಾಬನು ಅವಳಿಗೆ ಕಲಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:3
9 ತಿಳಿವುಗಳ ಹೋಲಿಕೆ  

ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.


ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.


ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು.


ಅವರ ತರುವಾಯ ನಾನು ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು