Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸ್ವಲ್ಪಕಾಲವಾದನಂತರ ಅಬ್ಷಾಲೋಮನು ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಮಂದಿ ಆಳುಗಳನ್ನು ನೇಮಿಸಿದನು. ಅದಕ್ಕಾಗಿ ಒಂದು ರಥವನ್ನೂ ಕುದುರೆಗಳನ್ನೂ ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನೂ ಕುದುರೆಗಳನ್ನೂ ತೆಗೆದುಕೊಂಡು ತನ್ನ ಮುಂದೆ ಮೈಗಾವಲಾಗಿ ಓಡುವದಕ್ಕೆ ಐವತ್ತು ಮಂದಿಯನ್ನು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದಾದನಂತರ, ಅಬ್ಷಾಲೋಮನು ತನಗಾಗಿ ರಥವನ್ನೂ ಕುದರೆಗಳನ್ನೂ ಪಡೆದನು. ಅವನು ರಥವನ್ನು ನಡೆಸುವಾಗ ಅವನ ಮುಂದೆ ಓಡಲು ಐವತ್ತು ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದರ ತರುವಾಯ ಅಬ್ಷಾಲೋಮನು ತನಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:1
11 ತಿಳಿವುಗಳ ಹೋಲಿಕೆ  

ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.


“ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.


ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.


ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು