Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಮುಂಜಾನೆಯೇ ಎದ್ದು ಊರುಬಾಗಿಲ ಬಳಿಯಲ್ಲಿ ನಿಂತುಕೊಳ್ಳುತ್ತಿದ್ದನು. ಯಾರಾದರೂ ತಮ್ಮ ವ್ಯಾಜ್ಯ ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋ‍ಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು, “ನೀನು ಯಾವ ಊರಿನವನು?” ಎಂದು ವಿಚಾರಿಸುತ್ತಿದ್ದನು. ಅವರು, “ನಿನ್ನ ಸೇವಕರಾದ ನಾವು ಇಸ್ರಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಹೊತ್ತಾರೆಯಲ್ಲೆದ್ದು ಊರುಬಾಗಲ ಬಳಿಯಲ್ಲಿ ನಿಂತುಕೊಳ್ಳುವನು. ಯಾವನಾದರೂ ತನ್ನ ವ್ಯಾಜ್ಯತೀರಿಸಿಕೊಳ್ಳುವದಕ್ಕಾಗಿ ಅರಸನ ಬಳಿಗೆ ಹೋಗುವದನ್ನು ಅಬ್ಷಾಲೋಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು ನೀನು ಯಾವ ಊರಿನವನು ಎಂದು ಕೇಳುವನು. ಅವನು - ನಿನ್ನ ಸೇವಕನಾದ ನಾನು ಇಸ್ರಾಯೇಲ್ಯರ ಇಂಥ ಕುಲಕ್ಕೆ ಸೇರಿದವನು ಎಂದು ಉತ್ತರ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಬ್ಷಾಲೋಮನು ಹೊತ್ತಾರೆಯಲ್ಲಿಯೇ ಎದ್ದು ದ್ವಾರದ ಹತ್ತಿರದಲ್ಲಿ ನಿಂತುಕೊಳ್ಳುತ್ತಿದ್ದನು. ತೊಂದರೆಯಲ್ಲಿ ಸಿಕ್ಕಿಕೊಂಡಿರುವ ಯಾವನಾದರೂ ತೀರ್ಪಿಗಾಗಿ ರಾಜನಾದ ದಾವೀದನ ಬಳಿಗೆ ಹೋಗುತ್ತಿರುವುದನ್ನು ಅಬ್ಷಾಲೋಮನು ಕಂಡರೆ ಅವನನ್ನು ತನ್ನ ಬಳಿಗೆ ಕರೆಯುತ್ತಿದ್ದನು. ಅಬ್ಷಾಲೋಮನು, “ನೀನು ಯಾವ ನಗರದಿಂದ ಬಂದೆ?” ಎಂದು ಕೇಳುತ್ತಿದ್ದನು. ಆ ಮನುಷ್ಯನು, “ನಾನು ಇಸ್ರೇಲಿನ ಇಂಥ ಕುಲಕ್ಕೆ ಸೇರಿದವನು” ಎಂದು ಉತ್ತರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಿಲ ಬಳಿಯಲ್ಲಿ ನಿಂತುಕೊಂಡು, ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು, “ನೀನು ಯಾವ ಪಟ್ಟಣದವನು?” ಎಂದು ಕೇಳಿದನು. ಅದಕ್ಕವನು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:2
13 ತಿಳಿವುಗಳ ಹೋಲಿಕೆ  

ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,


ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.


ಕೊಲೆಪಾತಕನು ಮುಂಜಾನೆ ಎದ್ದು, ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನಂತಿರುವನು.


ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.


ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.


ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.


ಹಾಗೆಯೇ ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ” ಎಂದು ಹೇಳಿದನು.


ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, “ನೀನು ಯಾತಕ್ಕೆ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?” ಎಂದು ಕೇಳಿದನು.


ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,


ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.


ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು.


“ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು, ನೆಮ್ಮದಿಯ ಕಾಲದಲ್ಲಿ ಬಂದು ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು