Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವದು; ಹೀಗಿರುವದರಿಂದ ನಿನ್ನೆ ಬಂದಂಥ ನಿನ್ನನ್ನು ಕರಕೊಂಡು ಹೋಗಿ ಸುಮ್ಮನೆ ಯಾಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರರನ್ನು ಕರಕೊಂಡು ಹಿಂದಿರುಗಿಹೋಗು; ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀನು ನನ್ನ ಜೊತೆ ಸೇರಿಕೊಳ್ಳಲು ಬಂದದ್ದು ನಿನ್ನೆಯಷ್ಟೇ. ನೀನು ಈಗ ನನ್ನೊಂದಿಗೆ ಬೇರೆಬೇರೆ ಸ್ಥಳಗಳಲ್ಲಿ ಅಲೆಯಬೇಕೇ? ಇಲ್ಲ! ನಿನ್ನ ಸೋದರರನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಹಿಂತಿರುಗಿಹೋಗು. ದಯೆಯೂ ನಂಬಿಗಸ್ತಿಕೆಯೂ ನಿನ್ನಲ್ಲಿ ತೋರಿಬರಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:20
17 ತಿಳಿವುಗಳ ಹೋಲಿಕೆ  

ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಮನಬಂದ ಕಡೆಗೆ ಅಲೆದಾಡಿದರು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವುದನ್ನು ನಿಲ್ಲಿಸಿಬಿಟ್ಟನು.


ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ.


ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.


ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.


ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.


ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.


ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ.


ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.


ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.


ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.


ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.


ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.


ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು