Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನು - ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ತೋರಿಸಿದರೆ ತನಗೆ ಸರಿಕಂಡಂತೆ ಮಾಡಲಿ, ಆತನ ಚಿತ್ತ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ನನ್ನ ಮೇಲೆ ಯೆಹೋವನಿಗೆ ಇಷ್ಟವಿಲ್ಲವೆಂದು ತೋರಿದರೆ, ಆಗ ನನ್ನ ವಿರುದ್ಧವಾಗಿ ಆತನು ತನಗೆ ತೋಚಿದ್ದನ್ನು ಮಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಒಂದು ವೇಳೆ ಅವರು, ‘ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು’ ಹೇಳಿದರೆ ಇಗೋ, ಅವರು ತಮ್ಮ ದೃಷ್ಟಿಗೆ ತೋಚಿದ ಹಾಗೆ ನನಗೆ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:26
18 ತಿಳಿವುಗಳ ಹೋಲಿಕೆ  

ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.


ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ ರಕ್ಷಿಸಿದನು.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.


ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.


ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”


ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.


ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.


ಇಗೋ, ಈಗ ನಾವು ನಿನ್ನ ಕೈಯಲ್ಲಿದ್ದೇವೆ; ನಿನಗೆ ಯಾವುದು ಒಳ್ಳೆಯದು, ನ್ಯಾಯವಾದುದ್ದು ಎಂದು ತೋರುತ್ತದೋ ಅದರಂತೆ ನಮಗೆ ಮಾಡು” ಎಂದು ಉತ್ತರಕೊಟ್ಟರು.


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು