Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:30
21 ತಿಳಿವುಗಳ ಹೋಲಿಕೆ  

ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.


ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.


ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.


ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.


ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.


ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,


ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,


ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು,


ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.


ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


“ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.


ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು