Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸರು ಚಿರಂಜೀವಿಯಾಗಿ ಬಾಳಲಿ! ಅರಸರು ಚಿರಂಜೀವಿಯಾಗಿ ಬಾಳಲಿ!” ಎಂದು ಘೋಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು - ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಾವೀದನ ಸ್ನೇಹಿತನೂ ಅರ್ಕೀಯನೂ ಆದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಹೂಷೈಯು, “ರಾಜನು ಚಿರಾಯುವಾಗಿರಲಿ, ರಾಜನು ಚಿರಾಯುವಾಗಿರಲಿ” ಎಂದು ಅಬ್ಷಾಲೋಮನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರ್ಕಿಯನಾದ ಹೂಷೈಯು ಎಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದಾಗ, ಹೂಷೈ ಅಬ್ಷಾಲೋಮನಿಗೆ, “ಅರಸನು ಬಾಳಲಿ, ಅರಸನು ಬಾಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:16
13 ತಿಳಿವುಗಳ ಹೋಲಿಕೆ  

ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.


ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.


ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.


ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.


ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!


ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!


ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!


ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.


ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.


ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.


ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.


ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.


ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು