Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಅಹೀತೋಫೆಲನು, “ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು, “ತಾವು ಹೋಗಿ ತಮ್ಮ ತಂದೆ ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗಮಿಸಿ. ಹೀಗೆ ಮಾಡುವುದಾದರೆ, ತಾವು ತಮ್ಮ ತಂದೆಗೆ ಅಸಹ್ಯವೈರಿಯಾದಿರೆಂದು ಎಲ್ಲ ಇಸ್ರಯೇಲರಿಗೆ ತಿಳಿಯುವುದು. ಆಗ ತಮ್ಮ ಪಕ್ಷದವರು ಹುಮ್ಮಸ್ಸುಗೊಳ್ಳುವರು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೋಗಿ ನಿನ್ನ ತಂದೆಯು ಮನೆಕಾಯುವದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗವಿುಸು. ಹೀಗೆ ಮಾಡುವದಾದರೆ ನೀನು ನಿನ್ನ ತಂದೆಗೆ ಅಸಹ್ಯವಾದಿಯೆಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಹೀತೋಫೆಲನು ಅಬ್ಷಾಲೋಮನಿಗೆ, “ನಿಮ್ಮ ತಂದೆಯು, ಮನೆಯನ್ನು ಕಾಯುವುದಕ್ಕೆ ತನ್ನ ಕೆಲವು ಪತ್ನಿಯರನ್ನು ಇಲ್ಲಿ ಬಿಟ್ಟುಹೋಗಿದ್ದಾನೆ. ನೀನು ಅವರೊಂದಿಗೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ದ್ವೇಷಿಸುವನೆಂಬುದು ಇಸ್ರೇಲರಿಗೆಲ್ಲ ಆಗ ತಿಳಿಯುವುದು; ನಿನಗೆ ಮತ್ತಷ್ಟು ಬೆಂಬಲವನ್ನು ಕೊಡಲು ನಿನ್ನ ಜನರೆಲ್ಲರನ್ನು ಪ್ರೋತ್ಸಾಹಿಸಿದಂತಾಗುತ್ತದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಹೀತೋಫೆಲನು ಅಬ್ಷಾಲೋಮನಿಗೆ, “ಮನೆಗೆ ಕಾವಲಿಟ್ಟ ನಿನ್ನ ತಂದೆಯ ಉಪಪತ್ನಿಯರ ಸಂಗಡ ಮಲಗು; ಆಗ ನಿನ್ನ ತಂದೆ ನಿನ್ನನ್ನು ತನ್ನ ಶತ್ರುವನ್ನಾಗಿ ಮಾಡಿದನೆಂದು ಎಲ್ಲ ಇಸ್ರಾಯೇಲರಿಗೆ ತಿಳಿಯುವುದು. ಆಗ ನಿನ್ನ ಜನರ ಕೈಗಳೂ ಬಲವಾಗುವುವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:21
22 ತಿಳಿವುಗಳ ಹೋಲಿಕೆ  

ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.


ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”


ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು.


ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.


ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.


ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು.


ಆಗ ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು. ಅವನು ನಿನ್ನ ಮಾತನ್ನು ತಳ್ಳಿಹಾಕುವುದಿಲ್ಲ” ಎಂದನು.


ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.


ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.


ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.


ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.


ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.


ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.


ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.


ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು


ಆಗ ಯೋನಾದಾಬನು ಅವನಿಗೆ, “ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, ‘ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೆ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ’ ಎಂದು ಹೇಳು” ಎಂದನು.


ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲರಿಗೆ ಮಹಾಬಾಧಕನಾದ ಹದದನಲ್ಲದೆ ಅವನೂ ವೈರಿಯಾಗಿದ್ದನು. ಅವನು ಅರಾಮ್ ದೇಶದಲ್ಲಿ ಆಳುವವನಾಗಿ ಇಸ್ರಾಯೇಲರನ್ನು ಬಹಳವಾಗಿ ದ್ವೇಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು