Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟು ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ದಾವೀದನಿಗೆ ಮತ್ತು ಅಬ್ಷಾಲೋಮನಿಗೆ ಅಹೀತೋಫೆಲನ ಸಲಹೆಯು ಬಹಳ ಮುಖ್ಯವಾಗಿತ್ತು. ದೇವರ ವಾಕ್ಯವು ಮನುಷ್ಯನಿಗೆಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ದಿವಸಗಳಲ್ಲಿ ಅಹೀತೋಫೆಲನು ತಿಳಿಸಿದ ಆಲೋಚನೆಯು ದೇವರನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಗಳನ್ನು ದಾವೀದನೂ, ಅಬ್ಷಾಲೋಮನೂ ಹಾಗೆಯೇ ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:23
20 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.


ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.


ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.


ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.


ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು