Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ಶಪಿಸುವುದೇನು? ಅಪ್ಪಣೆಯಾಗಲಿ. ನಾನು ಅವನಿರುವಲ್ಲಿಗೆ ಹೋಗಿ, ಅವನ ತಲೆಯನ್ನು ಹಾರಿಸಿಕೊಂಡು ಬರುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಚೆರೂಯಳ ಮಗ ಅಬೀಷೈಯು ಅರಸನಿಗೆ, “ಈ ಸತ್ತನಾಯಿ ಅರಸನಾದ ನನ್ನ ಒಡೆಯರನ್ನು ಶಪಿಸುವುದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೇ ಹೋಗಿ, ಅವನ ತಲೆ ಹಾರಿಸಿಕೊಂಡು ಬರುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ - ಈ ಸತ್ತ ನಾಯಿ ಅರಸನಾದ ನನ್ನ ಒಡೆಯನನ್ನು ಶಪಿಸುವದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೆ ಹೋಗಿ ಅವನ ತಲೆ ಹಾರಿಸಿಕೊಂಡು ಬರುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಚೆರೂಯಳ ಮಗನಾದ ಅಬೀಷೈಯು ರಾಜನಿಗೆ “ನನ್ನ ರಾಜನಾದ ಪ್ರಭುವೇ, ಈ ಸತ್ತನಾಯಿಯು ನಿನ್ನನ್ನು ಶಪಿಸುವುದೇಕೆ? ಶಿಮ್ಮಿಯ ತಲೆಯನ್ನು ಕತ್ತರಿಸಿಹಾಕುತ್ತೇನೆ, ನನಗೆ ಅಪ್ಪಣೆಕೊಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಚೆರೂಯಳ ಮಗ ಅಬೀಷೈಯನು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವುದೇನು? ನಾನು ದಾಟಿ ಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆ ಆಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:9
13 ತಿಳಿವುಗಳ ಹೋಲಿಕೆ  

ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.


ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?” ಎಂದು ಹೇಳಿದನು.


ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?


ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.


ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.


ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.


ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.


ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.


ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು