Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಸಿಂಹಹೃದಯಿಗಳಾದ ಶೂರರ ಎದೆಯೂ ಕರಗಿ ನೀರಾಗುವುದು. ನಿಮ್ಮ ತಂದೆ ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಯೇಲರು ಬಲ್ಲರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಸಿಂಹಹೃದಯರಾದ ಶೂರರ ಎದೆಯೂ ಕರಗಿ ನೀರಾಗುವದು. ನಿನ್ನ ತಂದೆಯು ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲ್ಯರು ಬಲ್ಲರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಸಿಂಹದಂತೆ ಶೂರರಾದ ಜನರು ಸಹ ಹೆದರಿಕೊಳ್ಳುತ್ತಾರೆ. ಏಕೆಂದರೆ ನಿನ್ನ ತಂದೆಯು ರಣವೀರನೆಂದು ಮತ್ತು ಅವನ ಜನರು ಧೈರ್ಯಶಾಲಿಗಳೆಂದು ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಸಿಂಹ ಹೃದಯರಾದ ಪರಾಕ್ರಮಶಾಲಿಯ ಹೃದಯವು ಸಹ ಸಂಪೂರ್ಣ ಕರಗುವುದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ, ಅವನ ಸಂಗಡ ಇರುವವರು ಪರಾಕ್ರಮಶಾಲಿಗಳೆಂದೂ ಇಸ್ರಾಯೇಲರೆಲ್ಲರು ಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:10
17 ತಿಳಿವುಗಳ ಹೋಲಿಕೆ  

ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.


ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.


ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.


ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.


ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.


ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?


ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.


ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.


ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!


ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು