Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇಸ್ರಯೇಲನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬುವಳನ್ನು ಕೂಡಿದ್ದರಿಂದ ಹುಟ್ಟಿದವನು ಈ ಅಮಾಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇವಿುಸಿದನು. ಇಸ್ರಾಯೇಲ್ಯನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬವಳನ್ನು ಕೂಡಿದ್ದರಿಂದ ಈ ಅಮಾಸನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಬ್ಷಾಲೋಮನು ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ಮಾಡಿದನು. ಅಮಾಸನು ಯೋವಾಬನ ಸ್ಥಾನಕ್ಕೆ ಬಂದನು. ಅಮಾಸನು ಇಸ್ರೇಲನಾದ ಇತ್ರನ ಮಗ. ಅಮಾಸನ ತಾಯಿಯಾದ ಅಬೀಗಲಳು, ನಾಹಾಷನ ಮಗಳು ಮತ್ತು ಚೆರೂಯಳ ಸೋದರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯಾಗಿ ಇಟ್ಟಿದ್ದನು. ಈ ಅಮಾಸನು ಇಸ್ರಾಯೇಲನಾದ ಇತ್ರನ ಮಗನು. ಈ ಇತ್ರನು ನಾಹಾಷನ ಮಗಳೂ, ಯೋವಾಬನ ತಾಯಿಯೂ, ಚೆರೂಯಳ ಸಹೋದರಿಯೂ ಆದ ಅಬೀಗೈಲಳನ್ನು ಮದುವೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:25
11 ತಿಳಿವುಗಳ ಹೋಲಿಕೆ  

ಇಷಯನ ಚೊಚ್ಚಲ ಮಗನು ಎಲೀಯಾಬ್, ಎರಡನೆಯ ಮಗ ಅಬೀನಾದಾಬ್,


ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.


ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು” ಎಂದು ಆಜ್ಞಾಪಿಸಿದನು.


ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.


ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.


ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.


ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು