Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ ತನ್ನ ಹೆಸರನ್ನುಳಿಸುವ ಮಗನಿಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ ಅದಕ್ಕೆ ತನ್ನ ಹೆಸರನ್ನಿಟ್ಟನು. ಅದು ಇಂದಿನವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭವೆಂದೆನಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಬ್ಷಾಲೋಮನು ಬದುಕಿದ್ದಾಗ, ರಾಜನ ಕಣಿವೆಯಲ್ಲಿ ಒಂದು ಸ್ತಂಭವನ್ನು ನೆಡಿಸಿದ್ದನು. ಅಬ್ಷಾಲೋಮನು, “ನನ್ನ ಹೆಸರನ್ನು ಜೀವಂತವಾಗಿರಿಸಲು ನನಗೆ ಗಂಡುಮಕ್ಕಳಿಲ್ಲ” ಎಂದು ಹೇಳಿ ಆ ಸ್ತಂಭಕ್ಕೆ ತನ್ನ ಹೆಸರನ್ನೇ ಕೊಟ್ಟಿದ್ದನು. ಆ ಸ್ತಂಭವನ್ನು “ಅಬ್ಷಾಲೋಮನ ಸ್ಮಾರಕಸ್ತಂಭ” ಎಂದು ಇಂದಿಗೂ ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:18
13 ತಿಳಿವುಗಳ ಹೋಲಿಕೆ  

“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು.


ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ


ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.


ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.


ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.


ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳಿ ಬಾಳನು” ಎಂದು ಹೇಳುತ್ತಾನೆ.


ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.


‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು