Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ - ಅಪ್ಪಣೆಯಾಗಲಿ, ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭವರ್ತಮಾನವನ್ನು ತಿಳಿಸುವೆನು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಈಗ ಓಡುತ್ತಾಹೋಗಿ ರಾಜನಾದ ದಾವೀದನಿಗೆ ಈ ವರ್ತಮಾನವನ್ನು ತಿಳಿಸುತ್ತೇನೆ. ಯೆಹೋವನು ನಿನ್ನ ಶತ್ರುವನ್ನು ನಾಶಮಾಡಿದನೆಂದು ನಾನು ಅವನಿಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:19
15 ತಿಳಿವುಗಳ ಹೋಲಿಕೆ  

ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.


ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.


ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.


ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.


ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.


ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.


ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.


ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.


ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,


ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು