Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ಸಮಾಚಾರ ಯೋವಾಬನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈ ಸುದ್ದಿಯನ್ನು ಜನರು ಯೋವಾಬನಿಗೆ ತಿಳಿಸಿದರು. ಅವರು ಯೋವಾಬನಿಗೆ, “ನೋಡು, ರಾಜನು ಅಳುತ್ತಿದ್ದಾನೆ ಮತ್ತು ಅಬ್ಷಾಲೋಮನಿಗಾಗಿ ಬಹಳ ದುಃಖಪಡುತ್ತಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:1
9 ತಿಳಿವುಗಳ ಹೋಲಿಕೆ  

ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ


ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.


ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ.


ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.


ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.


ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?


ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು