Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಅರಸನು, “ಹೆಚ್ಚು ಮಾತು ಏಕೆ? ಹೊಲವನ್ನು ನೀನು ಹಾಗು ಚೀಬ ಭಾಗಮಾಡಿಕೊಳ್ಳಬೇಕು. ಇದೇ ನನ್ನ ತೀರ್ಪು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಅರಸನು ಅವನಿಗೆ - ಹೆಚ್ಚು ಮಾತು ಯಾಕೆ? ನೀನೂ ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬದೇ ನನ್ನ ತೀರ್ಪು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ರಾಜನು ಮೆಫೀಬೋಶೆತನಿಗೆ, “ನಿನ್ನ ಸಮಸ್ಯೆಗಳ ಬಗ್ಗೆ ಹೆಚ್ಚಿಗೆ ಏನನ್ನೂ ಹೇಳಬೇಡ. ನಾನು ಈ ರೀತಿ ತೀರ್ಮಾನಿಸಿದ್ದೇನೆ. ನೀನು ಮತ್ತು ಚೀಬನು ಭೂಮಿಯನ್ನು ಹಂಚಿಕೊಳ್ಳಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:29
11 ತಿಳಿವುಗಳ ಹೋಲಿಕೆ  

ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,


ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.


ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.


“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.


ಅದಕ್ಕೆ ಅವರು ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನೆಂಬ ಒಬ್ಬ ಮನುಷ್ಯನನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, “ನೀನು ಚೀಬನೋ?” ಎಂದು ಕೇಳಲು ಅವನು, “ನಿನ್ನ ಸೇವಕನಾದ ನಾನು ಚೀಬನೆ” ಎಂದು ಉತ್ತರ ಕೊಟ್ಟನು.


ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ, “ನಿನ್ನ ಯಜಮಾನನಾದ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ.


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.


ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.


ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು