Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆಗ ಇಸ್ರಯೇಲರು ಯೆಹೂದ್ಯರಿಗೆ, “ಅರಸರಲ್ಲಿ ನಮಗೆ ಹತ್ತುಪಾಲು ಉಂಟಲ್ಲವೆ? ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸರನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೇ?’ ಎಂದರು. ಇಸ್ರಯೇಲರ ವಾದಕ್ಕಿಂತ ಯೆಹೂದ್ಯರ ವಾದ ಉಗ್ರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆಗ ಇಸ್ರಾಯೇಲ್ಯರು ಯೆಹೂದ್ಯರಿಗೆ - ಅರಸನಲ್ಲಿ ನಮಗೆ ಹತ್ತುಪಾಲು ಉಂಟಲ್ಲಾ; ದಾವೀದನ ವಿಷಯದಲ್ಲಿಯೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸನನ್ನು ಕರಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೋ ಅಂದರು. ಇಸ್ರಾಯೇಲ್ಯರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:43
23 ತಿಳಿವುಗಳ ಹೋಲಿಕೆ  

ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,


ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,


ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.


ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.


ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.


ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು.


ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.


ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.


ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.


ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.


ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು