Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ಎದ್ದು ಹೋಗಿ ನಿಮ್ಮ ಸೇವಕರನ್ನು ದಯಾಭಾವದಿಂದ ಮಾತಾಡಿಸಿ, ನೀವು ಹೀಗೆ ಮಾಡದಿದ್ದರೆ ಸರ್ವೇಶ್ವರನಾಣೆ, ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿಮ್ಮನ್ನು ಬಿಟ್ಟುಹೋಗುವರು. ಯೌವನಕಾಲದಿಂದ ಈವರೆಗೆ ನಿಮಗೆ ಬಂದೊದಗಿದ ಕೇಡುಗಳಲ್ಲಿ ಇದು ದೊಡ್ಡದಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯಾಭಾವದಿಂದ ಮಾತಾಡಿಸು; ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನಕಾಲದಿಂದ ಈವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ಮೇಲೆದ್ದು ನಿನ್ನ ಸೇವಕರೊಂದಿಗೆ ಮಾತನಾಡು; ಅವರನ್ನು ಪ್ರೋತ್ಸಾಹಿಸು. ಯೆಹೋವನಾಣೆ, ಈ ಕಾರ್ಯವನ್ನು ಮಾಡಲು ನೀನಿಂದು ಹೊರಗೆ ಹೋಗದಿದ್ದರೆ, ರಾತ್ರಿಯ ವೇಳೆಗೆ ನಿನ್ನೊಂದಿಗೆ ಯಾವ ಮನುಷ್ಯನೂ ಉಳಿಯುವುದಿಲ್ಲ. ನೀನು ನಿನ್ನ ಚಿಕ್ಕಂದಿನಿಂದ ಈವರೆಗೆ ಅನುಭವಿಸಿದ ಸಂಕಷ್ಟಗಳಲ್ಲೆಲ್ಲ ಇದು ತೀರ ಕೆಟ್ಟದಾಗಿರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈಗ ನೀನು ಎದ್ದು ಹೊರಟುಬಂದು, ನಿನ್ನ ಸೈನಿಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ, ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವುದಿಲ್ಲವೆಂದು ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವನಕಾಲದಿಂದ ಈ ದಿನದವರೆಗೂ ನಿನಗೆ ಬಂದ ಸಮಸ್ತ ಕೇಡಿಗಿಂತ ಅದು ಅಧಿಕ ಕೇಡಾಗಿರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:7
10 ತಿಳಿವುಗಳ ಹೋಲಿಕೆ  

ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.


ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


“ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.


“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.


ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು