Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೂ ಅಸಾಹೇಲನು ಬಿಟ್ಟುಹೋಗುವುದಕ್ಕೆ ಒಪ್ಪಲಿಲ್ಲ. ಆದಕಾರಣ ಅಬ್ನೇರನು ಭರ್ಜಿಯನ್ನು ಹಿಮ್ಮುಖವಾಗಿ ಎಸೆದು ಅವನ ಹೊಟ್ಟೆಯನ್ನು ತಿವಿದನು. ಆ ಭರ್ಜಿ ಅವನ ಬೆನ್ನಿನಿಂದ ಹಾಯ್ದು ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತುಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಸಾಹೇಲನು ಬಿಟ್ಟುಹೋಗುವದಕ್ಕೆ ಒಪ್ಪದ್ದರಿಂದ ಅಬ್ನೇರನು ಬರ್ಜಿಯನ್ನು ಹಿಂಗಡೆಯಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅವನು ಕೂಡಲೆ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತುಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೂ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದನು. ಆದ್ದರಿಂದ ಅಬ್ನೇರನು ತನ್ನ ಬರ್ಜಿಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಆ ಬರ್ಜಿಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅಸಾಹೇಲನು ಕೂಡಲೇ ಅಲ್ಲೇ ಸತ್ತುಬಿದ್ದನು. ಅಸಾಹೇಲನ ದೇಹವು ನೆಲದ ಮೇಲೆ ಬಿದ್ದಿತ್ತು. ಜನರು ಅವನ ಬಳಿಗೆ ಹೋಗಿ ಅಲ್ಲಿಯೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅಸಾಯೇಲನು ಒಪ್ಪದೆ ಹೋದದ್ದರಿಂದ, ಅಬ್ನೇರನು ತನ್ನ ಭರ್ಜಿಯ ಹಿಂಭಾಗದ ಮೊನೆಯಿಂದ ಅವನ ಹೊಟ್ಟೆಯೊಳಗೆ ತಿವಿಯಲು, ಅದು ಅವನ ಬೆನ್ನ ಹೊರಗೆ ತೂರಿ ಬಂತು. ಅವನು ಅಲ್ಲಿ ಬಿದ್ದು, ಅದೇ ಸ್ಥಳದಲ್ಲಿ ಸತ್ತನು. ಅಸಾಯೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:23
7 ತಿಳಿವುಗಳ ಹೋಲಿಕೆ  

ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಕಡಿಸಿ ನಿದ್ದೆಮಾಡುತ್ತಿರುವುದನ್ನು ಬಾಣ ಮತ್ತು ರೇಕಾಬರು ಕಂಡು ರಹಸ್ಯವಾಗಿ ಒಳಗೆ ಜಾರಿಕೊಂಡರು.


ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,


ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು.


ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು “ಅಮ್ಮಾ” ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು