Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರ ಅಚಲ ಪ್ರೀತಿಸತ್ಯತೆಗಳು ನಿಮ್ಮೊಂದಿಗಿರಲಿ! ಈ ಸತ್ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನ ಕೃಪಾಸತ್ಯತೆಗಳು ನಿಮ್ಮೊಂದಿಗಿರಲಿ; ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ನಿಮಗೆ ಕೃಪಾಳುವೂ ನಂಬಿಗಸ್ತನೂ ಆಗಿರಲಿ. ನೀವು ಸೌಲನ ಬೂದಿಯನ್ನು ಸಮಾಧಿಮಾಡಿದ್ದರಿಂದ ನಾನೂ ನಿಮಗೆ ಕರುಣೆ ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ಯೆಹೋವ ದೇವರು ನಿಮಗೆ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ, ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:6
15 ತಿಳಿವುಗಳ ಹೋಲಿಕೆ  

ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.


ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;


ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.


ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.


ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.


ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.


ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.


ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು.


ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು.


ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.


ಅವರಿಗೆ, “ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು