Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ಈ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ಆ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವುಗಳನ್ನು ಬೆನ್ಯಾಮೀನನ ದೇಶದ ಚೇಲದಲ್ಲಿರುವ ಸೌಲನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಳಿಟ್ಟರು. ಅವರು ಅರಸನು ಆಜ್ಞಾಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ, ದೇವರು ದೇಶಕ್ಕೋಸ್ಕರ ಮಾಡಿದ ಬಿನ್ನಹವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:14
16 ತಿಳಿವುಗಳ ಹೋಲಿಕೆ  

ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.


ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ರಾಶಿಯು ನಿರ್ಮಾಣವಾಯಿತು. ಅದು ಇಂದಿನ ವರೆಗೂ ಇದೆ. ಆಗ ಯೆಹೋವನ ಕೋಪಾಗ್ನಿ ತಣ್ಣಗಾಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.


ಆ ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು.


ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು.


ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.


ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.


ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು.


ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು.


ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು