Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ - ಇಸ್ರಾಯೇಲ್ಯರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು ಎಂದು ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:17
14 ತಿಳಿವುಗಳ ಹೋಲಿಕೆ  

ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.


ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.


ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.


ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.


ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು.


ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.


ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.


ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು.


ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು