Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:6
22 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.


ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.


ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.


ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.


ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.


ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.


ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.


ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.


ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.


ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,


ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.


ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.


ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು” ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು.


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.


ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.


ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು. ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೇಹು ಬೇರಾಕಾರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು