Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಇವರನ್ನು ಕೊಂದು ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:9
13 ತಿಳಿವುಗಳ ಹೋಲಿಕೆ  

ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.


ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.


ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.


ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು.


ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ.


ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.


ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು