Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ ಬೇತ್ಲೆಹೇವಿುನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲೊಲ್ಲದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:16
12 ತಿಳಿವುಗಳ ಹೋಲಿಕೆ  

ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.


ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.


ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.”


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.


ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.


ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.


ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು