Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡೆಸಿದ್ದನು. ಉದಾಹರಣೆಗೆ: ಒಮ್ಮೆ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಬ್ಬ ಹಿಮಕಾಲದಲ್ಲಿ ಸಿಂಹವೊಂದು ಗುಂಡಿಯಲ್ಲಿ ಬಿದ್ದಿತ್ತು. ಇವನು ಆ ಗುಂಡಿಗೆ ಇಳಿದುಹೋಗಿ ಅದನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡಿಸಿದನು. ದೃಷ್ಟಾಂತ - ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:20
19 ತಿಳಿವುಗಳ ಹೋಲಿಕೆ  

ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.


ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,


ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.


ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.


ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.


ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.


ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.


ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:


ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.


ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?


ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.


ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು