Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದುರುಳರಾದರೊ ದೂರವೆಸೆದ ಕಾಡುಮುಳ್ಳುಗಳು ಮುಟ್ಟಲಾಗದು ಅವುಗಳನು ಬರಿಗೈಯಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ; ಅವುಗಳನ್ನು ಹಿಡಿಯಬೇಕೆಂದಿರುವವನು ಕೈಯಿಂದ ಹಿಡಿಯಲಾರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಆದರೆ ಕೆಟ್ಟಜನರೆಲ್ಲರೂ ಮುಳ್ಳುಗಳಂತಿದ್ದಾರೆ. ಜನರು ಮುಳ್ಳುಗಳನ್ನು ಹಿಡಿದುಕೊಳ್ಳುವುದಿಲ್ಲ; ಅವರು ಅವುಗಳನ್ನು ಎಸೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:6
12 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.


ಸ್ತ್ರೀಯರಲ್ಲಿ ಶ್ರೇಷ್ಠಳು ನೀನು, ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು.


ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,


ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.


ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.


ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.


ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು